ಮುಖ್ಯವಾಹಿನಿಗೆ ಬರಲು ಮಹಿಳೆಗೆ ಇರುವ ಅಡತಡೆಗಳೇನು?
ಇದರ ಹಿಂದಿರುವ ಕಾರಣಗಳೇನು? ತೊಡಕುಗಳೇನು? ವಿಶ್ವ ಮಹಿಳಾ ದಿನ ಒಂದು ಟೊಳ್ಳು ಆಚರಣೆಯಾಗದಿರಲಿ ಎಂಬ ಆಶಯದಿಂದ ಇವುಗಳನ್ನು ಒಂದೊಂದಾಗಿ ಗುರುತಿಸಿದ್ದಾರೆ ವಿವೇಕ ಬೆಟ್ಕುಳಿ.
ಸಂಸ್ಕೃತ ಚಮತ್ಕಾವ್ಯ ಪರಂಪರೆಯ ಒಂದು ಇಣುಕು ನೋಟ; ಮತ್ತು ನನ್ನ ಪವಿತ್ರ ಪ್ರೇಮ ಕವನ ಮತ್ತು ಆ ದುಸ್ಸಾಹಸದ ಹಿಂದಿನ ಕತೆ.
ನನ್ನ ಮಗನಿಗೆ ೫ ವರುಷವಾಗಿದ್ದಾಗ ಒಂದು ಆಟಿಕೆಗಾಗಿ ಬೇಡಿಕೆಯಿಟ್ಟ. ಅದನ್ನು ನಾವು ಕೊಡಿಸಿದೆವು. ಮಾರನೇ ದಿನವಷ್ಟೇ ಅದೇ ಸರಣಿಯಲ್ಲಿಯ ಇನ್ನೊಂದು ಬೊಂಬೆ ಬೇಕೆಂದು ಹಠ ಶುರುವಾಯಿತು. ವಿಷಯ ಮರೆಸುವ ನನ್ನ ಯಾವುದೇ ಮಾಮೂಲಿನ ತಂತ್ರಗಳು ನಿಷ್ಪ್ರಯೋಜಕವಾಗಿ ಸಣ್ಣ ಅಳುಕ ಮುಂದುವರೆಯಿತು.
ಎಲ್ಲ ಆಸೆಗಳನ್ನು ಪೂರೈಸಬೇಕೇ? ಪೂರೈಸಿದಂತೆ ಆಸೆಯ ಬಳ್ಳಿ ಬೆಳೆಯುತ್ತಲೇ ಹೋಗುತ್ತದೆಯೇ? ಯಾರಿಗೆ ದುಃಖ? ಯಾರಿಗೆ ಕೋಪ? ಯಾರಿಗೆ ಮರುಕ? ಮಗುವಿನ ಮನಸ್ಸನ್ನು ನೋಯಿಸದೆ, ವಾದ-ಪ್ರತಿವಾದಗಳಿಗೆ ಎಡೆ ಕೊಡದೆ, ಜೀವನದ ಪಾಠಗಳನ್ನು ಕಲಿಸುವುದು ಹೇಗೆ? "ಸುಳ್ಳು" ತಂದೆ-ತಾಯಿಗಳಿಗೆ ಸಮರ್ಥ ಅಸ್ತ್ರವಾದಿತೇ? ಇಂದಿನ "ಬಿಳಿ ಸುಳ್ಳು" ನಾಳೆ ಬೆಳೆದು ಮುಳ್ಳು ಆದೀತೆ? ಈ ಪ್ರಶ್ನೆಗಳ ಮೇಲೆ ಅನುಭವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ ಶೃತಿ ಅರವಿಂದ್.
"ಎಲ್ಲರ ಜೀವನದಲ್ಲೂ ಕೆಲವು ಏರುಪೇರುಗಳಾಗುತ್ತವೆ. ನೀವೇನು ತಿಳಿಯದವರಲ್ಲ. ಕೊನೆತನಕ ಹೋರಾಡುತ್ತೇನೆ ಎನ್ನುವವ ಮಾತ್ರ ಸೈನಿಕ. ನಾನು ಗೆಲ್ಲತ್ತೇನೆ ಎನ್ನುವುದು ಬಿಟ್ಟು ಬೇರೇನನ್ನೂ ಚಿಂತಿಸದೆ ಇರುವುದಕ್ಕೆ ಆತನಿಗೆ ಮಾತ್ರ ಸಾಧ್ಯ. ನೀವು ಗೆಲ್ಲುತ್ತೀರಿ. "
ಹೋರಾಟವಾದರೂ ಯಾರೊಡನೆ? ಸೇನಾನಿ ಗುರು ಸಾರ್ ಗೆಲ್ಲುತ್ತಾರಾ? ಗೆದ್ದರಾ?
ಮಾನವೀಯ ಸಂಬಂಧಗಳನ್ನು ಎಳೆ ಎಳೆಯಾಗಿ ಬಿಡಿಸುತ್ತ ನವಿರಾಗಿ ಕತೆ ಹೆಣೆದಿದ್ದಾರೆ ಗೋಪೀನಾಥ ರಾವ್.ಮುಂದೆ ಓದಿ.
ಕನ್ನಡದಲ್ಲಿ ಬಾವುಟ ಅಂದರೆ ಧ್ವಜ, ಸಂಕೇತ, ಗುರುತು ಅನ್ನುವುದು ಸಾಮಾನ್ಯ ಅರ್ಥ. ಸರಿಯೋ ತಪ್ಪೋ, ನನಗೆ ತಿಳಿದಂತೆ, ಅದು ಹೀಗೆ ಅಂತ ಅನಿಸುತ್ತದೆ
ಹೊರನಾಡಿನಲ್ಲಿರುವ ಕನ್ನಡ ಮಕ್ಕಳಿಗೆ ಕನ್ನಡವನ್ನು ಕಲಿಸುತ್ತ, ಕನ್ನಡ ಸಂಸ್ಕೃತಿಯ ಪರಿಸರವನ್ನು ಕಲ್ಪಿಸುವ ಉದ್ದೇಶದಿಂದ ವರ್ಷ ೨೦೦೦ ದಲ್ಲಿ ಕ್ಯಾಲಿಫೋರ್ನಿಯದ ಅವೈನ್ ನಗರದಲ್ಲಿ ಕನ್ನಡ ಕಲಿ ಸಂಸ್ಥೆ ಮತ್ತು ಶಾಲೆಗಳು ಪ್ರಾರಂಭವಾದವು. ನಂತರ, ಇದರಿಂದ ಪ್ರೇರಿತವಾಗಿ ಅಮೇರಿಕದ ತುಂಬ ಮತ್ತು ಇತರೆಡೆ 'ಕನ್ನಡ ಕಲಿ' ಶಾಲೆ ಮತ್ತು ಕಾರ್ಯಕ್ರಮಗಳು ಹುಟ್ಟಿಕೊಂಡವು. ಇದು ನಿಮಗೆ ಗೊತ್ತಿರುವ ವಿಷಯ.
ಸ್ವತಂತ್ರವಾಗಿ, ಇಂತಹದೆ ಕಳಕಳಿಯಿಂದ, ಮುಂಬಯಿ ನಗರದಲ್ಲಿ, 'ಚಿಣ್ಣರ ಬಿಂಬ' ಸಂಸ್ಥೆಯನ್ನು ಹುಟ್ಟು ಹಾಕಿ, ಕನ್ನಡ ಮತ್ತು ಕನ್ನಡ ಸಂಸ್ಕೃತಿಗಾಗಿ ಮೌನವಾಗಿ ದುಡಿಯುತ್ತ ಹೆಮ್ಮರವಾಗಿ ಬೆಳೆದು ನಿಂತಿದ್ದಾರೆ ಪ್ರಕಾಶ ಭಂಡಾರಿ. ಇವರ ಕಾರ್ಯ ವೈಖರಿ ಮತ್ತು ಸಾಧನೆಗಳು ಹೊರನಾಡಿನಲ್ಲಿ ಕನ್ನಡಕ್ಕಾಗಿ ದುಡಿಯುತ್ತಿರುವ ನಮ್ಮೆಲ್ಲರಿಗೂ ಆದರ್ಶಪ್ರಾಯ. ಕನ್ನಡ ಕಲಿಗಳೆ, ಇವರನ್ನು ನಾವು ಅಭಿನಂದಿಸುವುದಷ್ಟೇ ಅಲ್ಲ, ಅನುಕರಿಸುವುದೂ ಅಗತ್ಯ.
ಬದುಕು ಮತ್ತು ಬಾಳು, ಈ ಪದಗಳು ಸಮಾನಾರ್ಥಕವೇ? ಇಲ್ಲವಾದರೆ ಏನು ವ್ಯತ್ಯಾಸ? ಜೀವಿಸುವುದು ಹೇಗೆ? ದೀರ್ಘ ಆಯುಷ್ಯದ ಗುಟ್ಟು ಏನು? ಬನ್ನಿ ಕೆದಕಿ ನೋಡೋಣ.
ರಾಜ್ಯೋತ್ಸವ, ದೀಪಾವಳಿ, ದಸರೆ ಎಲ್ಲರಿಗೂ ಗೊತ್ತು. ನಾಡ ಹಬ್ಬ ಎಲ್ಲಿಂದ ಬಂತು?