ಕನ್ನಡ ರಾಯಭಾರಿ - ಪ್ರಕಾಶ ಭಂಡಾರಿ
ಹೊರನಾಡಿನಲ್ಲಿರುವ ಕನ್ನಡ ಮಕ್ಕಳಿಗೆ ಕನ್ನಡವನ್ನು ಕಲಿಸುತ್ತ, ಕನ್ನಡ ಸಂಸ್ಕೃತಿಯ ಪರಿಸರವನ್ನು ಕಲ್ಪಿಸುವ ಉದ್ದೇಶದಿಂದ ವರ್ಷ ೨೦೦೦ ದಲ್ಲಿ ಕ್ಯಾಲಿಫೋರ್ನಿಯದ ಅವೈನ್ ನಗರದಲ್ಲಿ ಕನ್ನಡ ಕಲಿ ಸಂಸ್ಥೆ ಮತ್ತು ಶಾಲೆಗಳು ಪ್ರಾರಂಭವಾದವು. ನಂತರ, ಇದರಿಂದ ಪ್ರೇರಿತವಾಗಿ ಅಮೇರಿಕದ ತುಂಬ ಮತ್ತು ಇತರೆಡೆ 'ಕನ್ನಡ ಕಲಿ' ಶಾಲೆ ಮತ್ತು ಕಾರ್ಯಕ್ರಮಗಳು ಹುಟ್ಟಿಕೊಂಡವು. ಇದು ನಿಮಗೆ ಗೊತ್ತಿರುವ ವಿಷಯ.
ಸ್ವತಂತ್ರವಾಗಿ, ಇಂತಹದೆ ಕಳಕಳಿಯಿಂದ, ಮುಂಬಯಿ ನಗರದಲ್ಲಿ, 'ಚಿಣ್ಣರ ಬಿಂಬ' ಸಂಸ್ಥೆಯನ್ನು ಹುಟ್ಟು ಹಾಕಿ, ಕನ್ನಡ ಮತ್ತು ಕನ್ನಡ ಸಂಸ್ಕೃತಿಗಾಗಿ ಮೌನವಾಗಿ ದುಡಿಯುತ್ತ ಹೆಮ್ಮರವಾಗಿ ಬೆಳೆದು ನಿಂತಿದ್ದಾರೆ ಪ್ರಕಾಶ ಭಂಡಾರಿ. ಇವರ ಕಾರ್ಯ ವೈಖರಿ ಮತ್ತು ಸಾಧನೆಗಳು ಹೊರನಾಡಿನಲ್ಲಿ ಕನ್ನಡಕ್ಕಾಗಿ ದುಡಿಯುತ್ತಿರುವ ನಮ್ಮೆಲ್ಲರಿಗೂ ಆದರ್ಶಪ್ರಾಯ. ಕನ್ನಡ ಕಲಿಗಳೆ, ಇವರನ್ನು ನಾವು ಅಭಿನಂದಿಸುವುದಷ್ಟೇ ಅಲ್ಲ, ಅನುಕರಿಸುವುದೂ ಅಗತ್ಯ.