Publications

ಬೆಳಕು ತೋರಿದ ಬದುಕು : ಹೆಲನ್ ಕೆಲರ್

ಹೆಲನ್ ಕೆಲನ್‍ರಂಥವರು ಹುಟ್ಟುವುದು ಸಾಯುವುದಕ್ಕಲ್ಲ – ಅಪ್ರತಿಮ ಸೇವೆ- ಸಾಧನೆಗಳಿಂದ ಅಮರರಾಗುವುದಕ್ಕಾಗಿ!
ಅವಳ ವೈವಿಧ್ಯಮಯ, ಸಾಹಸಪೂರ್ಣ, ವಾತ್ಸಲ್ಯಪೂರಿತ, ಜ್ಞಾನಕೌತೂಹಲಭರಿತ ಜೀವನ ಮತ್ತು ಸಾಧನೆಗಳನ್ನೂ, ಅವಳು ಮಾಡಿದ ಲೋಕಾಧಿಕ ಉಪಕಾರವನ್ನೂ ಸ್ಮರಿಸಲು ನೆರವಾಗುವಂತೆ, “ಬೆಳಕು ತೋರಿದ ಬದುಕು” ಎಂಬ ಸಂಕ್ಷಿಪ್ತ ವೃತ್ತಾಂತವೊಂದು ಇಲ್ಲಿದೆ.

ತೋಳಬಂದಿ ಮತ್ತು ಸೌಂದರ್ಯಸಾಧನೆ

ಮನುಷ್ಯ‌, ಹೆಂಗಸಾಗಲಿ ಗಂಡಸಾಗಲಿ, ತನ್ನ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಲು ಏನೇನೋ ಮಾಡುತ್ತಾನೆ.  ಇವುಗಳಲ್ಲಿ ಯಾವುದು ನಿಜವಾದ ಸೌಂದರ್ಯವರ್ಧಕ? ಯಾವುದು ಶಾಶ್ವತ? ಇದಕ್ಕೆ ೭ನೆ ಶತಮಾನದ, ವಿದ್ವಾಂಸನಾದ ಭರ್ತೃಹರಿಯ ಉತ್ತರ ಏನು?

ಮುಗ್ಧ ಮನಸ್ಸುಗಳ ಸಾಕ್ಷಾತ್ಕಾರವೇ ಸಾಕೇತ ಸಿದ್ಧಾಂತ, ಒಂದು ಸಂದೇಶ

[ಮೊನ್ನೆ ತಾನೆ ಕನ್ನಡ ಕಲಿಯ ಬಿತ್ತರಿಕೆ ಬಿಕಾಸ ೧೧-೨೦೨೩-೦೧ರಲ್ಲಿ ನಿಮಗೆ ಪರಿಚಯಿಸಿದ ಸಾಕೇತ ಸಿದ್ದಾಂತಕ್ಕೆ ಸ್ಪಂದಿಸಿ ಒಂದು ಸಂದೇಶವನ್ನು, ಲಲಿತ ಪ್ರಬಂಧವನ್ನು ಅನ್ನಿ, ಕಳಿಸಿದ್ದಾರೆ ರೂಪ ಮಂಜುನಾಥ. ಕರ್ನಾಟಕ ಸಾಂಸ್ಕೃತಿಕ ಸಂಘದ ಸುವರ್ಣ ಮಹೋತ್ಸವ‌ ಕಾರ್ಯಕ್ರಮದ ಕವಿಗೋಷ್ಠಿಯಲ್ಲಿ, ಕವನ ಓದಿದ ಮಕ್ಕಳ ಬಗ್ಗೆ, ಅವರನ್ನು ಬೆಳೆಸಿದ ತಾಯಿ ತಂದೆಯರ ಬಗ್ಗೆ, ಅರಳು ಮಲ್ಲಿಗೆ ಮತ್ತು ಗೋಕುಲ ಮಕ್ಕಳು ಎನ್ನುವ ಪುಟ್ಟ ಕನ್ನಡ ಸಾಂಸ್ಕೃತಿಕ ಸಮುದಾಯಗಳ ಬಗ್ಗೆ, ಹಾಗೂ ಸಾಕೇತ ಸಿದ್ಧಾಂತರ ಕವನಗಳನ್ನು ಪ್ರಕಟಿಸಿದ ಕನ್ನಡ ಕೂಟದ ಸ್ಮರಣ ಸಂಚಿಕೆಯ ಬಗ್ಗೆ,  ತಮ್ಮ ಅನಿಸಿಕೆಗಳನ್ನು ಇಲ್ಲಿ ತೆರೆದಿಟ್ಟಿದ್ದಾರೆ. ]

ಕನ್ಸಡಕ್ಕೊಂದು ಸಾಕೇತ ಸಿದ್ಧಾಂತ

ಕನ್ನಡಕ್ಕೊಂದು

ಸಾಕೇತ ಸಿದ್ಧಾಂತ

ಏನಿದು ಸಾಕೇತ ಸಿದ್ಧಾಂತ?‌
ಕನ್ನಡ ಕೇವಲ ಒಂದು ವ್ಯಾವಹಾರಿಕ ಮಾಧ್ಯಮವೋ?‌ ಆಥವ ಅದಕ್ಕಿಂತ ಮಿಗಿಲಾದ ಮೌಲ್ಯ ಏನಾದರೂ ಅದರಲ್ಲಿ ಇದೆಯೆ? ಕನ್ನಡ ಕಲಿಯಲು ಅತ್ಯಂತ ಪರಿಣಾಮಕಾರಿ ವಿಧಾನ ಯಾವುದು?

 

ನಮ್ಮ ನಡುವಿದ್ದ ನಾಡೋಜ

ನಮ್ಮ ನಡುವಿದ್ದ ನಾಡೋಜ

[ ಇಂದು, ಡಿಸೆಂಬರ ೨೮, ಕನ್ನಡದ ಹೊಸ ಬೆಳಕು ಮೂಡಿದ ದಿನ.  ಶ್ರೀನಿವಾಸ ಎಂಬ ಒಬ್ಬ ಹಳ್ಳಿಯ ಬಡ ಹುಡುಗ, ಹುಟ್ಟಿದ ದಿನ. ಎಲ್ಲ ಕಷ್ಟಗಳನ್ನೂ ಮೀರಿ, ತನ್ನ ಕಲಿಯುವ ಉತ್ಕಟತೆ, ಪುಸ್ತಕ ಪ್ರೇಮ, ಮತ್ತು ಹೊಸತನದ ಹಂಬಲಗಳಿಂದ ಒಬ್ಬ ಉತ್ಕೃಷ್ಟ ಸಂಶೋಧಕನಾಗಿ, ಸಂಶೋಧನೆಗೇ ಒಂದು ಹೊಸ ಆಯಾಮವನ್ನು ಜೋಡಿಸಿ, ನಾಡೋಜನಾಗಿ ಬೆಳೆದು ನಿಂತ ಕತೆ ಇದು.  ಕನ್ನಡ ಕಲಿಗಳಿಗಷ್ಟೆ ಅಲ್ಲ, ಎಲ್ಲರಿಗೂ ಸ್ಫೂರ್ತಿ ನೀಡುವ,  ಡಾ. ಶ್ರೀನಿವಾಸ ಹಾವನೂರರನ್ನು ಇದಕ್ಕಿಂತ ಹತ್ತಿರವಾಗಿ ಕಂಡು ಹೇಳಿದ ಕತೆ ನಿಮಗೆ ಬೇರೆ ಎಲ್ಲಿಯೂ ಸಿಗದು. – ಸಂ.]

ಶಂಖಣ್ಣನ ಹಣೆಬರಹ

ಚೆನ್ನುಡಿ

ಶಂಖಣ್ಣನ ಹಣೆಬರಹ

ಯಾವ ಮನೆತನದಲ್ಲಿ ಹುಟ್ಟಿದರೇನು? ಏನು ಕಲಿತರೇನು? ಏನು ಮಾಡಿದರೇನು?
ಮುಂದೆ ಏನಾಗುವುದು? ಎಲ್ಲವೂ ಹಣೆಬರಹ ಎಂದುಕೊಳ್ಳುವುದು ಸಾಮಾನ್ಯ. ವಿಶೇಷವಾಗಿ, ನಿರೀಕ್ಷಿಸಿದ್ದು ಆಗದಿದ್ದಾಗ, ಕೆಲವರಿಗೆ ಸಿರಿ, ಸಂಪತ್ತು, ಸೌಲಭ್ಯ, ಖ್ಯಾತಿ, ಹೀಗೆಲ್ಲ, ಪಾತ್ರರಿದ್ದರೂ ಸಿಗದಿದ್ದಾಗ, ಅಥವ ಅಪಾತ್ರರಿದ್ದರೂ ಅನಾಯಾಸವಾಗಿ ಸಿಕ್ಕಾಗ ಅಂದುಕೊಳ್ಳುವುದು ಹಣೆಬರಹ, ದೈವ, ಭಾಗ್ಯ, ಲಕ್ಕು, ಅಂತ! ಇದು ನಿಜವೋ, ಕೇವಲ ಸಮಾಧಾನಕ್ಕೋಸ್ಕರ ಹೇಳಿಕೊಳ್ಳುವ ಮಾತೋ? ಅಂತೂ ಒಂದಾನೊಂದು ಸಂದರ್ಭದಲ್ಲಿ ನಿಮಗೂ ಹೀಗೆ ಅನಿಸಿರಬಹುದು. ಎಲ್ಲವನ್ನೂ ಆದಂತೆ ಒಪ್ಪಿಕೊಂಡು ಕೂಡುವ ಜಾಯಮಾನ ಚಾಣಕ್ಯನದು ಅಲ್ಲ ಆದರೂ ಅವನು ಹೇಳಿದ್ದು ಹೀಗೆ:

ಚಾತಕ - ಕವಿಸಮಯ

ಚೆನ್ನುಡಿ

ಚಾತಕ - ಕವಿಸಮಯ

ಚಾತಕ, Clamator jacobinus, Jacobin cuckoo , pied cuckoo or pied crested cuckoo ಎಂದು ಸಾಮಾನ್ಯವಾಗಿ ಗುರುತಿಸಲ್ಪಟ್ಟ, ಒಂದು ಕೋಗಿಲ ಜಾತಿಯ ಪಕ್ಷಿ. ಇದಕ್ಕೆ ಶಾರಂಗ,  ಮಾತಂಗ,  ಸ್ತೋಕಕ ಎಂದು ಕೂಡ ಹೆಸರುಗಳು ಇವೆ.

ಕ್ಲಿಕ್ ಕ್ಲಿಕ್ ಗಣಕಪ್ಪ - ಕನ್ನಡ ಪದ್ಯ ಪಾಠ

ಕನ್ನಡ ಪದ್ಯ ಪಾಠ

ಕ್ಲಿಕ್‌ ಕ್ಲಿಕ್‌ ಗಣಕಪ್ಪ

ಇನ್ನೇನು ಬೇಸಿಗೆ ರಜೆ ಮುಗಿಯುತ್ತ ಬಂತು. ಶಾಲೆಯ ಹೊಸ ವರ್ಷ ಆರಂಭ. ಎಲ್ಲರಿಗೂ ಹಿಗ್ಗೋ ಹಿಗ್ಗು! ಮತ್ತೆ ಮೆಚ್ಚಿನ ಟೀಚರರ ಪಾಠ, ಹಳೆ ಗೆಳೆಯರ ಜೊತೆ ಆಟ; ಹೊಸ ಗೆಳೆಯರು, ಹೊಸ ಪುಸ್ತಕಗಳು, ಹೊಸ ಬಟ್ಟೆಗಳು ಎಲ್ಲಕ್ಕೂ ಹೊಸ ಹುರುಪು. ಈಗಂತೂ, ಹೊಸ ತರಗತಿಗೆ, ಹೊಸ ಗಣಕವನ್ನು ಕೊಳ್ಳುವುದು‌ ಸಾಮಾನ್ಯ ಆಗಿದೆ. ಗಣಕ ಅಂದರೆ ಕಂಪ್ಯೂಟರು, ಲ್ಯಾಪ್‌ ಟಾಪು, ಅಥವ ಟ್ಯಾಬ್ಲೆಟ್ಟು; ಎಷ್ಟೋ ಅಪ್‌ ಗಳನ್ನು ಅಳವಡಿಸಿಕೊಳ್ಳಬಹುದಾದ ಮೊಬೈಲ್‌ ಫೋನು ಕೂಡ ಆಗಬಹುದು. ಹೀಗೆ ಒಂದು ಗಣಕವನ್ನು ನಮ್ಮ ಪುಟ್ಟುವಿಗೆ ಅಪ್ಪ ಅಮ್ಮ ಕೊಡಿಸಿದಾಗ ಏನಾಯ್ತು? ಅವನು ಕಲಿತ ಪಾಠ ಏನು?

ಕಾಲ: ಪ್ರಕಿರಿತ ಪ್ರಜ್ಞಾನ

[ ಕಾಲ ಎಂದರೆ ಸದಾ ಉರುಳುತ್ತಿರುವ, ಮುನ್ನಡೆಯುತ್ತಿರುವ, ಮತ್ತು ಕಳೆಯುತ್ತಿರುವ ಸಮಯ, ಎಲ್ಲವನ್ನೂ ಆವರಿಸಿರುವ ವಿಷ್ಣು, ಎಲ್ಲವನ್ನೂ ಮೀರಿರುವ ಎಲ್ಲಕ್ಕೂ ಮೂಲ ಪರಮಾತ್ಮ ಶಿವ, ಅವ್ಯಕ್ತದಿಂದ ಹೊಡಕರಿಸಿದ ಕೃಷ್ಣ, ಮತ್ತು ಕಪ್ಪು ಎನ್ನುವ ಸಾಮಾನ್ಯ ಅರ್ಥಗಳು. ಶಿವ ಎಂದರೆ ಶುಭ್ರ, ಬಿಳಿ ಕೂಡ.
"ನೀ ಯಾರು ಹೇಳು" ಎಂದು ಅರ್ಜುನ ಕೇಳಿದಾಗ ಕೃಷ್ಣ ಹೇಳಿದ್ದು, " ಕಾಲೋಽಸ್ಮಿ, ಲೋಕಕ್ಷಯಕೃತ್ಪ್ರವೃದ್ಧಃ, ಲೋಕಗಳನಳಿಸುವ ಮಹಾನ್ ಕಾಲ ನಾನು."